ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.14: ಉತ್ತರ ಪ್ರದೇಶದ ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಉಪ್ಪಿನಂಗಡಿಯ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ

ರಜೆಯಲ್ಲಿ ಊರಿಗೆ ಬಂದವರು ಕಳೆದ ಸೋಮವಾರವಷ್ಟೇ ಮರಳಿ ಕರ್ತವ್ಯಕ್ಕೆ ಹಿಂತಿರುಗಿದ್ದರು. ಸಂದೇಶ್ ಅವರು ಮಥುರಾದಲ್ಲಿನ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು ಅಲ್ಲಿಯೇ ಹೃದಯಾಘಾತಕ್ಕೀಡಾಗಿರುವುದಾಗಿ ತಿಳಿದು ಬಂದಿದೆ. ಇವರು ಕಳೆದ 14 ವರ್ಷಗಳಿಂದ ಯೋಧರಾಗಿ ತಾಯಿ ಭಾರತಾಂಭೆಯ ಸೇವೆ ಸಲ್ಲಿಸುತ್ತಿದ್ದರು. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

 

error: Content is protected !!

Join the Group

Join WhatsApp Group