ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.14 : ಇಂದು ನಸುಕಿನ ಜಾವ ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಕಳೆದ ಕೆಲ ಸಮಯದಿಂದ ಸೈಲೆಂಟ್ ಆಗಿದ್ದ ಭಜರಂಗ ದಳ ಇದೀಗ ಮತ್ತೆ ಎಕ್ಟಿವ್ ಆಗಿದೆ.

 

ಕೊಟ್ಟಾರ ಬಳಿ ಮಿನಿ ಟೆಂಪೋ ತಡೆದು 4 ಕೋಣಗಳನ್ನು ರಕ್ಷಣೆ ಮಾಡಿ ಒಬ್ಬ ಆರೋಪಿಯನ್ನು ಹಿಡಿದು ಸಂಘಟನೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಉರ್ವ ಪೊಲೀಸ್ ಠಾಣೆಗೆ ಸಮೀಪದಲ್ಲೇ ಘಟನೆ ನಡೆದಿದೆ, ಉಡುಪಿ ಯಿಂದ ಮಂಗಳೂರು ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 4 ಕೋಣಗಳ ರಕ್ಷಣೆ ಮಾಡಲಾಗಿದೆ. ಉರ್ವ ಪೊಲೀಸರು ಸ್ಥಳಕ್ಕೆ ಧಾವಿಸಿ ಕೋಣಗಳು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆ ಮೂಲಕ ಕೆಲವು ವರ್ಷಗಳಿಂದ ಸೈಲೆಂಟ್ ಇದ್ದ ಸಂಘಟನೆ ಇದೀಗ ಮತ್ತೆ ಚುರುಕಾಗಿ ವಯಲೆಂಟ್ ಆಗಿದೆ. ಹಿಂದಿನಂತೆ ಫೀಲ್ಡ್ ಗಿಳಿದು ಗೋಸಾಗಾಟ ತಡೆಯಲು ಮುಂದಾಗಿದ್ದು ಸರಕಾರ ಮತ್ತು ಪೋಲೀಸ್ ಇಲಾಖೆಗೆ ಸವಾಲಾಗಿದೆ.

 

error: Content is protected !!

Join the Group

Join WhatsApp Group