ಡೆಂಗ್ಯೂ ಜ್ವರಕ್ಕೆ ಓರ್ವ ಬಲಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.17, ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ.

ಇವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ವರದಿಯಲ್ಲಿ ಡೆಂಗ್ಯೂ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೂ ಚಿಕಿತ್ಸೆ ಸ್ಪಂದಿಸಿದ ಇವರು ಮಂಗಳವಾರ ಮೃತಪಟ್ಟಿದ್ದಾರೆ. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Also Read  ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು

error: Content is protected !!
Scroll to Top