ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಿದ್ದಾರೆ. ಘಟನೆ ಕುರಿತಂತೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ  ಪ್ರಧಾನಿ ನರೇಂದ್ರ ಮೋದಿ 

error: Content is protected !!
Scroll to Top