ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.19, ಠಾಣಾ ವ್ಯಾಪ್ತಿಯ ಸವಣೂರು ಪರಣೆ ಎಂಬಲ್ಲಿ ಗೇರುಬೀಜ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಉರುಳಿದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದು, ಲಾರಿಯಲ್ಲಿದ್ದ ಗೇರುಬೀಜ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಧಾವಿಸಿದ ಸವಣೂರಿನ ಎಸ್ ಡಿಪಿಐ ಕಾರ್ಯಕರ್ತರು ಗೇರುಬೀಜವನ್ನು ಮತ್ತೊಂದು ವಾಹನಕ್ಕೆ ತುಂಬಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

error: Content is protected !!
Scroll to Top