ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜೂ.19., ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು.

ಸುಳ್ಯ ನ.ಪಂ.ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು.


ಬಳಿಕ ರಾಷ್ಟ್ರಭಕ್ತ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ನುಡಿನಮನ ಸಲ್ಲಿಸಲಾಯಿತು.

error: Content is protected !!

Join the Group

Join WhatsApp Group