ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ

(ನ್ಯೂಸ್ ಕಡಬ) newskadaba.com.ಬೆಳಗಾವಿ,ಜೂ.21:ಜೂನ್ 25 ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ 16 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಬೆಳಗಾವಿ ಜಿಲ್ಲೆಯ ಚ.ಕಿತ್ತೂರು ತಾಲೂಕಿನ ಕಲಬಾಂವಿಯಲ್ಲಿ ನಡೆದಿದೆ.


ಈ ಬಾಲಕ ಹೊರರಾಜ್ಯದ ಹಿನ್ನೆಲೆ ಹೊಂದಿದ್ದರಿಂದ ಸೋಂಕು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈತ ಕಲಬಾಂವಿಯಲ್ಲಿ ಮುಂಬರಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿತ್ತು ಆದರೆ ಈಗ ಆತನಿಗೆ ಸೋಂಕು ತಗುಲಿರುವುದರಿಂದ ಪರೀಕ್ಷೆ ಎದುರಿಸುವುದು ಅನುಮಾನ ಎಂದೇ ಹೇಳಲಾಗುತ್ತಿದೆ.


ಬಾಲಕ ಈ ಹಿಂದೆ ಚೆನ್ನೈನಲ್ಲಿರುವ ಆತನ ಅಕ್ಕನ ಮನೆಗೆ ಹೋಗಿ ಬಂದಿದ್ದ ಎನ್ನಲಾಗಿದೆ. ಜೂ.1 ರಂದು ಈತ ಕಲಬಾಂವಿ ಗ್ರಾಮಕ್ಕೆ ಆಗಮಿಸಿದ್ದ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಈ ವಿಚಾರ ತಾಲೂಕಾಡಳಿತಕ್ಕೂ ತಿಳಿದಿದ್ದರಿಂದ ಅಧಿಕಾರಿಗಳು ವಿಚಾರಣೆ ನಡೆಸಿ ಬಾಲಕನನ್ನು ಹೋ ಕ್ವಾರಂಟೈನ್‍ನಲ್ಲಿ ಇರಿಸಿದ್ದಾರು. ನಂತರ ಅಧಿಕಾರಿಗಳು ಜೂ.16ಕ್ಕೆ ಯುವಕನ ಗಂಟಲು ದ್ರವ ಪರೀಕ್ಷೆ ಕಳುಹಿಸಿದ್ದರು. ಈಗ ಕೊರೊನಾ ಸೋಂಕು ದೃಢವಾಗಿದೆ. ಬಾಲಕನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Also Read  ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್

error: Content is protected !!
Scroll to Top