ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

 

Scroll to Top