ತೆಂಗು ಫಸಲು- ಬಹಿರಂಗ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 24, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರಗಳಲ್ಲಿನ 2020-21ನೇ ಸಾಲಿನ ತೆಂಗು ಫಸಲನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.

ಜುಲೈ 21 ರಂದು ಬೆಳಿಗ್ಗೆ ಕಚೇರಿ ನರ್ಸರಿ ಬಂಟ್ವಾಳ, ಮಧ್ಯಾಹ್ನ ವಿಟ್ಲ ತೋಟಗಾರಿಕೆ ಕ್ಷೇತ್ರ, ಜುಲೈ 22 ರಂದು ಬೆಳಿಗ್ಗೆ ಕಚೇರಿ ನರ್ಸರಿ ಬೆಳ್ತಂಗಡಿ, ಮಧ್ಯಾಹ್ನ ಚಾರ್ಮಾಡಿ ತೋಟಗಾರಿಕೆ ಕ್ಷೇತ್ರ, ಜುಲೈ 23 ರಂದು ಬೆಳಿಗ್ಗೆ ಕಬಕ ತೋಟಗಾರಿಕೆ ಕ್ಷೇತ್ರ, ಮಧ್ಯಾಹ್ನ ಕಚೇರಿ ನರ್ಸರಿ ಸುಳ್ಯ ಹಾಗೂ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ ಸುಳ್ಯ, ಜುಲೈ 24 ರಂದು ಬೆಳಿಗ್ಗೆ ಪಡೀಲ್ ತೋಟಗಾರಿಕೆ ಕ್ಷೇತ್ರ, ಮಧ್ಯಾಹ್ನ ಜಿಲ್ಲಾ ಸಸ್ಯಗಾರ ಮಂಗಳೂರು ಇಲ್ಲಿನ ತೆಂಗು ಫಸಲನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ. ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸಬಹುದು. ವಿಲೇವಾರಿ ಷರತ್ತುಗಳು ಹಾಗೂ ಹೆಚ್ಚಿನ ವಿವರಗಳಿಗೆ ರಾಜ್ಯ ವಲಯ, ಮಂಗಳೂರು ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ, ಇ ಮೇಲ್ sadhssdk@yahoo.in ದೂರವಾಣಿ ಸಂಖ್ಯೆ 0824- 2444298 ನ್ನು ಸಂಪರ್ಕಿಸಲು ಮಂಗಳೂರು ಹಿರಿಯ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಸುಬ್ರಹ್ಮಣ್ಯ: ಅರ್ಚಕರಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ಪ್ರಕರಣ ➤ ಹಲ್ಲೆಗೆ ಕುಮ್ಮಕ್ಕು ನೀಡಿದ ಗೃಹರಕ್ಷಕ ದಳದ ಸಿಬ್ಬಂದಿ ಅಮಾನತು

error: Content is protected !!
Scroll to Top