ಬೆಳ್ತಂಗಡಿ: ಮನೆಯವರನ್ನು ಕಟ್ಟಿಹಾಕಿ 13 ಲಕ್ಷ ರೂಪಾಯಿಗಳ ನಗ ನಗದು ದರೋಡೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.26, ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ಎಂಬಲ್ಲಿ ದರೋಡೆಕೋರರು ಕಳ್ಳತನ ಮಾಡಿದ ಘಟನೆ ನಡೆದಿದೆ.

ಅಚ್ಯುತ ಭಟ್ ಎಂಬವರ ಮನೆಗೆ ಶುಕ್ರವಾರ ಮುಂಜಾನೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕಟ್ಟಿಹಾಕಿ 13 ಲಕ್ಷ‌ರೂ. ಮೌಲ್ಯದ ನಗದು, 40 ಪವನ್ ಚಿನ್ನ, ಒಂದು ಕೆಜಿ ಬೆಳ್ಳಿ, 25 ಸಾವಿರ ರೂ. ದೋಚಲಾಗಿದೆ. ಅಚ್ಯುತ ಭಟ್ ಅವರು ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ರಾತ್ರಿ ಸುಮಾರು ನಾಯಿಗಳು ಬೊಗಳಿದ ಸದ್ದುಕೇಳಿ ಮನೆಯವರು ಬಾಗಿಲು ತೆರೆದಾಗ ದರೋಡೆಕೋರರು ಮನೆಯೊಳಗೆ ನುಗ್ಗಿ ಅಚ್ಯುತ ಭಟ್ ಸೇರಿದಂತೆ ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ನಾಲ್ವರು ದರೋಡೆಕೋರರು ಮುಸುಕುಧಾರಿಗಳಾಗಿ ಮನೆನುಗ್ಗಿದ್ದು, ಒಂದು ವೇಳೆ ಪೊಲೀಸರಿಗೆ ಮಾಹಿತಿ ನೀಡಿದರೆ ಮನೆಮಂದಿಯ ಜೀವಹಾನಿ ಮಾಡುವುದಾಗಿ ದರೋಡೆಕೋರರು ಬೆದರಿಕೆಯೊಡ್ಡಿದ್ದಾರೆ.

Also Read  ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಖೈದಿಗಳ ವಿರುದ್ಧ ಎಫ್ಐಆರ್

error: Content is protected !!
Scroll to Top