ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.

 


ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ಗಾಯಾಳುಗಳನ್ನ ಸ್ಥಳೀಯರ ನೆರೆವಿನಿಂದ ಆಸ್ಪತ್ರೆಗೆ ಗಾಕಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು, ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ತೆರೆಳುತ್ತಿದ್ದ ಶಾಸಕ ಯು.ಟಿ ಖಾದರ್ ಅವರು ತಮ್ಮ ವಾಹನ ನಿಲ್ಲಿಸಿ ಅಪಘಾತ ನಡೆದ ಸ್ಥಳಕ್ಕೆ ತೆರಳಿ ಅಲ್ಲಿದ್ದ ಸಂಚಾರಿ ಪೊಲೀಸರು ಮತ್ತು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಅಪಘಾತಕ್ಕೀಡಾದ ವಾಹನಗಳನ್ನ ಪಕ್ಕಕ್ಕೆ ಸರಿಸಲು ನೆರವು ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Also Read  ಹಾಲು ಉತ್ಪಾದಕರಿಗೆ 650 ಕೋಟಿ ಪ್ರೋತ್ಸಾಹ ಧನ ಬಾಕಿ ಶೀಘ್ರ ಬಿಡುಗಡೆ

 

error: Content is protected !!
Scroll to Top