ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಉಮೇಶ್ ಉಪ್ಪಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಈ ಹಿಂದೆ ಕಡಬ ಠಾಣೆಯಲ್ಲಿ ಉಪ ನಿರೀಕ್ಷಕರಾಗಿದ್ದ ಉಮೇಶ್ ಉಪ್ಪಳಿಕೆಯವರು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಮೊದಲು ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ನಾಗೇಶ್ ಕದ್ರಿಯವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಉಮೇಶ್ ಉಪ್ಪಳಿಕೆಯವರನ್ನು ನೇಮಕಗೊಳಿಸಿ ಆದೇಶಿಸಲಾಗಿತ್ತು. ಅದರಂತೆ ಶುಕ್ರವಾರ ಸಂಜೆ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಉಮೇಶ್ ಉಪ್ಪಳಿಕೆಯವರು ಅಧಿಕಾರ ಸ್ವೀಕರಿಸಿದ್ದಾರೆ.

 

error: Content is protected !!

Join the Group

Join WhatsApp Group