ಮಂಗಳೂರು: ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ ವಿಕಾಸ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 29. ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಜೂ.29 ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.

 

ಈ ಮೊದಲು ಪೊಲೀಸ್ ಆಯುಕ್ತರಾಗಿದ್ದ ಡಾ.ಪಿ.ಎಸ್. ಹರ್ಷ ಅವರು ಈಗಾಗಲೇ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ನೂತನ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಕಾಸ್ ಕುಮಾರ್ ಅವರು ಹಿಂದೆ ಚಿಕ್ಕಮಂಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ, ನಕ್ಸಲ್ ನಿಗ್ರಹದಳದ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿಸುತ್ತಿದ್ದರು.

Also Read  2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ" ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top