SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.03: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯು ಮುಕ್ತಾಯಗೊಂಡಿದೆ. ಪರೀಕ್ಷೆ ವೇಳೆ ಕಾರ್ಯನಿರ್ವಾಹಿಸಿದ ಶಿಕ್ಷಕರಿಗೆ ಶಿಕ್ಷಣ ಸಚಿವರು ಧನ್ಯವಾದ ತಿಳಿಸಿದ್ದಾರೆ.

 

ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿದರೆ ಯಾವುದೂ ಸಾಧ್ಯ ಎಂಬುದನ್ನು ಈ ಪರೀಕ್ಷೆಗಳು ರುಜುವಾತು ಮಾಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.ಶುಕ್ರವಾರದಂದು ಎಸ್‌‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡ ಹಿನ್ನೆಲೆ ಟ್ವೀಟ್‌ ಮಾಡಿರುವ ಅವರು, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Also Read  ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ

 

error: Content is protected !!
Scroll to Top