ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಹಿರಿಯ ನಟಿ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಂತಿ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯ ಸತೀಶ್ ಎಂಬುವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರಿಗೆ ಕೊರೊನಾ ಆಗಿದೆಯೇ ಎಂಬ ಅನುಮಾನ ಮುಂಚೆ ಇತ್ತು, ಆದರೆ ಅವರಿಗೆ ಕೊರೊನಾ ಆಗಿಲ್ಲವೆಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಸ್ಥಿತಿಯಲ್ಲಿಲ್ಲ ಎಂದು ಸಹ ಜಯಂತಿ ಪುತ್ರ ಕೃಷ್ಣಕುಮಾರ್ ಹೇಳಿದ್ದಾರೆ . ಈ ಮೊದಲು ಸಹ ಜಯಂತಿ ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಆಗಿತ್ತು, ಆಗಲೂ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read  ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ 'ಕಾಂತಾರ' ಪ್ರದರ್ಶನ

 

error: Content is protected !!
Scroll to Top