ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಪ್ರಕರಣದಿಂದ ಮೊದಲ ಸಾವು ಸಂಭವಿಸಿದೆ.  ಈ ನಿಟ್ಟಿನಲ್ಲಿ ವರ್ತಕರು, ಆಟೋ, ರಿಕ್ಷಾ ಚಾಲಕರು ಜು.14 ರ ಬಳಿಕ ಮಧ್ಯಾಹ್ನ 2 ರಿಂದ ಸ್ವಯಂಪ್ರೇರಿತ ಬಂದ್ ನಡೆಸಲು ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ನಿರ್ಧರಿಸಲಾಗಿದೆ.

error: Content is protected !!

Join the Group

Join WhatsApp Group