ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.

 

 

ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ, ಯುವ ನೇತಾರ ಹರೀಶ್ ಪೂಂಜಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ” ರಾಜ್ಯದಲ್ಲಿಯೇ ಮೊದಲ ಪ್ರಯೋಗವಾಗಿ ಕೊರೋನಾ ದೃಢಪಟ್ಟಿರುವ ಆದರೆ ರೋಗ ಲಕ್ಷಣವಿಲ್ಲದ ಬಂಧುಗಳಿಗಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯ ರೋಗ ಆಸ್ಪತ್ರೆಯನ್ನು ಕೋವಿಡ್ ಕೇರ್ ಸಂಟರ್ ಆಗಿ ಸಜ್ಜುಗೊಳಿಸಲಾಗಿದೆ”. ಎಂದಿದ್ದಾರೆ.

 

Also Read  ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top