ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.14: ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರು ರಾಜ್ಯ ಸರಕಾರ ಇದರ ನಿಯಂತ್ರಣಕ್ಕೆ ಮತ್ತೊಂದು ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ.


ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶದಂತೆ ಗಂಟಲು ದ್ರವ ಪರೀಕ್ಷೆಗೊಳಪಟ್ಟವರು ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್, ಕ್ವಾರಂಟೈನ್ ಕಡ್ಡಾಯವಾಗಿ ಪಾಲಿಸಬೇಕು ಎಂದಿದೆ. ಕೊವೀಡ್ -೧೯ ಸೋಂಕಿನ ಪರೀಕ್ಷೆಗಾಗಿ ಗಂಟಲಿನ ದ್ರವ ಮಾದರಿ ಕೊಟ್ಟಿದ್ದರೆ ಅಂತಹ ವ್ಯಕ್ತಿಗಳು, ಪರೀಕ್ಷಾ ವರದಿ ಬರೋ ತನಕ ಐಸೋಲೇಷನ್‌ನಲ್ಲಿರುವುದು ಕಡ್ಡಾಯವಾಗಿದೆ. ಫಲಿತಾಂಶ ಬರುವ ಮುನ್ನ ಅಜಾಗರೂಕತೆಯಿಂದ ಇತರರೊಂದಿಗೆ ಬೆರೆಯುವುದು, ಕಚೇರಿಗಳಿಗೆ ಹೋಗಿ ಕೆಲಸ ಮಾಡುವುದು. ಮನೆಯಿಂದ ಹೊರಗೆ ಸುತ್ತಾಡುವುದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ಕೊಟ್ಟಿದೆ.

Also Read  ➤ ಅರಣ್ಯ ಇಲಾಖೆಯ ನರ್ಸರಿಗೆ ಎಂಟ್ರಿ ಕೊಟ್ಟ ಕಾಡಾನೆಗಳು

error: Content is protected !!
Scroll to Top