ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ,ಜು.15: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

 


ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಛೇರಿಗೆ ಮಾಹಿತಿ ತಿಳಿಸಿದ್ದು ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

Also Read  ಮಂಗಳೂರು: ಮುಂದುವರಿದ ಎಸಿಬಿ ರೈಡ್ ➤ ಯು.ಟಿ ಇಫ್ತಿಕಾರ್ ಹಾಗೂ ಪತ್ನಿಯ ಅಕೌಂಟ್ ಸೀಜ್..‼️ ವಿಚಾರಣೆಗೆ ಹಾಜರಾಗುವಂತೆ ಸೂಚನೆ

error: Content is protected !!
Scroll to Top