ನೆಲ್ಯಾಡಿ: ಕಂಟೈನರ್ ಲಾರಿ – ಅಶೋಕ್ ಲೈಲ್ಯಾಂಡ್ ದೋಸ್ತ್ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ಎಂಬಲ್ಲಿ ಕಂಟೈನರ್ ಲಾರಿ ಮತ್ತು ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಢಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಅಶೋಕ್ ಲೇಲ್ಯಾಂಡ್ ದೋಸ್ತ್ ಚಾಲಕ ಮೆಲ್ಕಾರ್ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ನವಾಝ್ ಬೇಕರಿ ತಿಂಡಿ ಲೈನ್ ಸೇಲ್ ಮಾಡುತ್ತಿದ್ದರು. ಮೃತದೇಹವನ್ನು ಪುತ್ತೂರು ಆಸ್ಪತ್ರೆಯಲ್ಲಿ ಇಡಲಾಗಿದೆ.

error: Content is protected !!

Join the Group

Join WhatsApp Group