ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜು.20: ಕೊರಾನಾ ಲಾಕ್ ಡೌನ್ ಕಾರಣದಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಆಟಿ ಅವiವಾಸ್ಯೆ ಪುಣ್ಯ ತೀರ್ಥ ಸ್ನಾನಕ್ಕೆ ಈ ವರುಷ ಅತೀ ಕಡಿಮೆ ಪ್ರಮಾಣದಲ್ಲಿ ಭಕ್ತರು ಆಗಮಿಸಿ ತೀಥ್ಸ್ನಾನ ಮಾಡಿದರು.





 


ಲಾಕ್ಡೌನ್ ಕಾರಣದಿಂದ ದೇವಳದ ವತಿಯಿಂದ ಯಾವುದೇ ವ್ಯವಸ್ಥೆಗಳು ಇಲ್ಲದಿದ್ದರೂ ಕಡಿಮೆ ಸಂಖ್ಯೆಯಲ್ಲಿ ಶ್ರದ್ದಾ ಭಕ್ತಿಯಿಂದ, ಭಕ್ತಾದಿಗಳು ನದಿಯಲ್ಲಿ ತೀರ್ಥ ಸ್ನಾನ ಮಾಡಿ ಆಟಿ ಅಮಾಸಾಸ್ಯೆ ಪಾರಂಪರಿಕ ಪದ್ದತಿಯಂತೆ ನವ ದಾನ್ಯಗಳನ್ನ ಗಂಗೆಗೆ ಅರ್ಪಿಸಿ, ಗತಿಸಿದ ಹಿರಿಯರಿಗೆ ಮೋಕ್ಷ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.






 

error: Content is protected !!
Scroll to Top