ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

 

ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ, ಸಿಬ್ಬಂದಿ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.  ಆ್ಯಂಬುಲೆನ್ಸ್ ‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಯ ಸುತ್ತ ಇನ್ನೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದ್ದಾರೆ.

Also Read  ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

 

 

error: Content is protected !!
Scroll to Top