ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com  ಜು.26:  ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ.

 

 

 

ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಮುನಿರಾಜು ಅವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪರವಾಗಿ ಅವರನ್ನು ಅಧಿಕೃತವಾಗಿ ಆಹ್ವಾನಿಸಿದ್ದು, ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ.ಇದೇ ಸಂದರ್ಭದಲ್ಲಿ, ರಾಮಮಂದಿರದ ಶಿಲಾನ್ಯಾಸಕ್ಕಾಗಿ ಸ್ವಾಮೀಜಿಯವರ ಅಮೃತಹಸ್ತದಿಂದ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಮೃತ್ತಿಕೆಯನ್ನೂ ಸಂಗ್ರಹಿಸಲಾಗಿದೆ. ಶಿಲಾನ್ಯಾಸದ ಪ್ರಯುಕ್ತ ದೇಶದ ಎಲ್ಲ ಪುಣ್ಯಕ್ಷೇತ್ರಗಳಿಂದ ಮೃತ್ತಿಕೆ ಸಂಗ್ರಹಿಸಲಾಗುತ್ತಿದ್ದು, ಎಲ್ಲವನ್ನೂ ಅಯೋಧ್ಯೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.

Also Read  ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ಗುರುಗಳಿಗೆ ಹತ್ಯೆ ಬೆದರಿಕೆ...! ➤ ಆರೋಪಿ ಪೊಲೀಸ್ ವಶಕ್ಕೆ

 

 

 

error: Content is protected !!
Scroll to Top