ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು.30: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡದಲ್ಲಿ ಅಣಬೆ ಕೃಷಿ ಬಗ್ಗೆ ತರಬೇತಿ ಹಾಗೂ ಅಣಬೆ ಕೃಷಿಗೆ ಬೇಕಾದ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

 

 

ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾ ಮೇದಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಲಾತಿ ಬಂಟೋಡಿ ವಹಿಸಿದ್ದರು. ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಸುಹಾನ ತಾಲೂಕು ಪಂಚಾಯತ್ ಹರಿಪ್ರಸಾದ್ , ಸಂಪನ್ಮೂಲ ವ್ಯಕ್ತಿ ತೀರ್ಥಾನಂದ ಕೋಡಂಕೇರಿ, ಸೋಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ , ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಂದರಿ, ಹಮೀದ್. ಜಿ.ಕೆ. ಪಂಚಾಯತ್ ಕಾರ್ಯದರ್ಶಿ ವಿದ್ಯಾದರ್ , ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

 

Scroll to Top