ಮದುವೆ ಮಾಡಿಸಿಲ್ಲ ಎಂಬ ಕೋಪಕ್ಕೆ ನಾಲ್ವರನ್ನು ಹತ್ಯೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.4: ವ್ಯಕ್ತಿಯೋರ್ವ ತನಗೆ ಮದುವೆ ಮಾಡಿಸಿಲ್ಲ ಎಂಬ ಕೋಪದಿಂದ ತನ್ನ ಮೂವರು ಮಾವಂದಿರು ಮತ್ತು ಚಿಕ್ಕಮ್ಮನನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.


ಉದಯ(45) ಎಂಬಾತ ಕೊಲೆ ಆರೋಪಿಯಾಗಿದ್ದು, ಕೂಲಿ ಕಾರ್ಮಿಕರಾಗಿರುವ ಮಾವಂದಿರದ ಬಾಬು (65), ವಿಠಲ (60), ಸದಾಶಿವ (55), ದೇವಕಿ (58) ಮೃತಪಟ್ಟವರು. ಅವಿವಾಹಿತರಾಗಿರುವ ಉದಯ, ಕಳೆದ ಕೆಲವು ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ, ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ತಮ್ಮ ಸಂಬಂಧಿಕರೆಲ್ಲರನ್ನೂ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆದರೆ ಅವನ ಮಾತನ್ನು ಯಾರೂ ಕೂಡಾ ಗಣನೆಗೆ ತೆಗೆದುಕೊಂಡಿರಲಿಲ್ಲ.


ಆರೋಪಿಯ ಮಾವ ವಿಠಲ ಎಂಬವರು ಬೇರೆಯವರ ಕೊಡಲಿಗಳಿಗೆ ಹಿಡಿ ಹಾಕುವುದು ಹಾಗೂ ಹರಿತ ಮಾಡಿ ಕೊಡುವ ಕೆಲಸಗಳನ್ನೂ ಮಾಡುತ್ತಿದ್ದು, ಅದಕ್ಕೆಂದು ತಂದಿದ್ದ ಕೊಡಲಿಗಳು ಮನೆಯಲ್ಲಿದ್ದವು. ಆರೋಪಿಯು ಏಕಾಏಕಿ ಅದರಲ್ಲೊಂದು ಕೊಡಲಿಯನ್ನು ಹಿಡಿದು ಎಲ್ಲರನ್ನು ಕಡಿಯಲಾರಂಬಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ತಾಯಿ ಲಕ್ಷ್ಮಿಯನ್ನು ಕೂಡ ಹತ್ಯೆಗೈಯಲು ಯತ್ನಿಸಿದ್ದು ತಾಯಿ ತಪ್ಪಿಸಿಕೊಂಡು ಹತ್ತಿರದ ಮನೆಗೆ ಓಡಿ ಹೋಗಿ ಘಟನೆಯ ಬಗ್ಗೆ ತಿಳಿಸಿದ್ದಾರೆ.

Also Read  ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ


ಸಾರ್ವಜನಿಕರು ಸ್ಥಳಕ್ಕೆ ತೆರಳಿದ ವೇಳೆ ಆರೋಪಿಯು ಅರ್ಧ ಕಿ.ಮೀ ದೂರ ಓಡಿ ಪರಾರಿಯಾಗಲೆತ್ನಿಸಿದ್ದು ಅಷ್ಟರಲ್ಲೇ ಕಟ್ಟತ್ತಾರಿನಿಂದ ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತರಲಾಗಿದೆ. ಆರೋಪಿಯು ಮತ್ತೆ ಪರಾರಿಯಾಗಲು ಪ್ರಯತ್ನಿಸಿದ್ದು ಆಗ ಹಗ್ಗದಲ್ಲಿ ಕಟ್ಟಿಹಾಕಿ ಪೊಲೀಸರಿಗೊಪ್ಪಿಸಲಾಗಿದೆ. ಕಾಸರಗೋಡು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾಲಕೃಷ್ಣನ್ ನಾಯರ್ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Also Read  ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

error: Content is protected !!
Scroll to Top