ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.


ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ ದಿನಾಂಕ ನಿಶ್ಚಯವಾಗಿಲ್ಲ’ ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

Also Read  ಗಗನಕ್ಕೇರಿದ ಆಭರಣಗಳ ಬೆಲೆ..!


ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಫಲಿತಾಂಶ ಪ್ರಕಟಪಡಿಸಿದ ಬಳಿಕ ವಿದ್ಯಾರ್ಥಿಗಳು ತಮ್ಮ ಫಲತಾಂಶವನ್ನು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.

error: Content is protected !!
Scroll to Top