ಕರಾವಳಿಯಲ್ಲಿ ಬಿರುಸುಗೊಂಡ ಮಳೆರಾಯ ➤ ನೆಲ್ಯಾಡಿಯಲ್ಲಿ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.9, ವರುಣನ ಅಬ್ಬರವು ದಿನೇ ದಿನೇ ಹೆಚ್ಚುತ್ತಿದ್ದು, ಹಲವೆಡೆ ಪ್ರಾಣ ಹಾನಿ ಸಂಭವಿಸುತ್ತಿವೆ. ಇದರ ನಡುವೆ ತಾಲೂಕಿನ ನೆಲ್ಯಾಡಿ ಸಮೀಪ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ.

ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ನಿವಾಸಿ ವಿನೋದ ಮರಿಯ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಶೌಚಾಲಯದ ಕಟ್ಟಡವು ಭಾರೀ ಗಾಳಿ ಮಳೆಗೆ ಭಾಗಶಃ ಹಾನಿಗೊಳಗಾಗಿದ್ದು, ಸುಮಾರು 30 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

error: Content is protected !!
Scroll to Top