60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!!

(ನ್ಯೂಸ್ ಕಡಬ) newskadaba.com ಲಕ್ನೋ,ಸೆ. 60 ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಭಾಗ್ಪತ್ ಬಳಿಯ ಯಮುನಾ ನದಿಯಲ್ಲಿ ಸಂಭವಿಸಿದೆ.

ಈ ದುರಂತದಲ್ಲಿ ಸುಮಾರು 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನಷ್ಟು ಮಂದಿ ಮುಳುಗಿರುವ ಆತಂಕ ವ್ಯಕ್ತವಾಗಿದೆ. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಂಡೊಯ್ಯುತ್ತಿದ್ದುದ್ದರಿಂದ ಈ ಅವಘಡ ಸಂಭವಿಸಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, 12 ಮಂದಿಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

Also Read  ಮಂಗಳೂರು: ನಕಲಿ ನೋಟಿನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ...! ➤ ದೇವಸ್ಥಾನದ ಹುಂಡಿಯಲ್ಲಿ ನೋಟಿನ ಜೊತೆಗೆ ಬಳಸಿದ ಕಾಂಡೋಮ್ ಹಾಕಿ ವಿಕೃತಿ ಮೆರೆದ ಪಾಪಿಗಳು

ಘಟನೆ ನಡೆದ ಸಂದರ್ಭದಲ್ಲಿ ಜನರಿಂದ ಕಕ್ಕಿರಿದಿದ್ದ ದೋಣಿ ಹರಿಯಾಣ ಕಡೆಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

error: Content is protected !!
Scroll to Top