ವಿದೇಶದಿಂದ ಬಂದವರಿಗೆ ಕ್ವಾರೆಂಟೈನ್ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ಕೊರೊನಾದಿಂದಾಗಿ ವಿದೇಶದಲ್ಲಿದ್ದಾಗ ಒಮ್ಮೆ ಊರಿಗೆ ಹೋದರೆ ಸಾಕಪ್ಪ ಅಂತ ಇದ್ದವರಿಗೆ ಊರಿಗೆ ಬಂದಾಗ ಕ್ವಾರಂಟೈನ್‍ನಿಂದಾಗಿ ಮತ್ತೆ ಸಮಸ್ಯೆ ಎದುರಾಗುತ್ತಿತ್ತು ಆದರೆ ಇದೀಗ ರಾಜ್ಯ ಸರಕಾರ ಇದ್ದನ್ನು ದೂರ ಮಾಡಿದೆ.

ವಿದೇಶದಿಂದ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಆಗುವವರ ಕ್ವಾರಂಟೈನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬದಲಿಸಿದ್ದು ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕಾಗಿಲ್ಲ. ಬದಲಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾಗಬೇಕಾಗಿದೆ.

ಈ ಹಿಂದೆ ವಿದೇಶದಿಂದ ವಾಪಾಸ್ ಆಗುವವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಬಳಿಕ ಕೊರೊನಾ ವರದಿ ನೆಗೆಟಿವ್ ಬಂದಲ್ಲಿ 7 ದಿನ ಹೋಂ ಕ್ವಾರಂಟೈನ್ಗೆ ಒಳಗಾಗಬೇಕಿತ್ತು. ಆದರೆ ಇನ್ನು ಮುಂದೆ ವಿದೇಶದಿಂದ ಬರುವವರಿಗೆ ಜ್ವರ, ಶೀತ, ಕೆಮ್ಮು ಮೊದಲಾದ ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ರ್ಯಾಪಿಡ್ ಆಂಟಿಜಿನ್ ಟೆಸ್ಟ್ ನಡೆಸಿ ಕೊರೊನಾ ಪಾಸಿಟಿವ್ ಆದಲ್ಲಿ ಹೋಂ ಐಸೊಲೇಷನ್ ಅಥವಾ ಆಸ್ಪತ್ರೆಗೆ ದಾಖಲಿಸಬೇಕು. ನೆಗಟಿವ್ ವರದಿ ಬಂದ್ದಲ್ಲಿ 14 ದಿನಗಳ ಕಾಲ ಕಡ್ಡಾಯ ಹೋಂ ಕ್ವಾರಂಟೈನ್ಗೆ ಒಳಗಾಗಬೇಕಾಗಿದೆ. ಒಂದು ವೇಳೆ ಹೋಂ ಕ್ವಾರಂಟೈನ್ ಸಾಧ್ಯವಾಗದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಲ್ಲಿರಬೇಕಾಗಿದೆ.

Also Read  ಎಡಮಂಗಲ: ನಾಯಿ ಅಡ್ಡಬಂದ ಪರಿಣಾಮ ಮಗುಚಿಬಿದ್ದ ಸ್ಕೂಟರ್ ➤ ಸಹಸವಾರ ಮೃತ್ಯು

ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದೇಶದಿಂದ ಆಗಮಿಸುವವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿತ್ತು. ಹಾಗೆಯೇ ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್ (ಲಾಡ್ಜ್) ಗೆ ಕಳುಹಿಸಿದ ಮರುದಿನವೇ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ ವರದಿ ನೆಗೆಟಿವ್ ಬಂದಲ್ಲಿ 14 ದಿನಗಳ ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತಿತ್ತು.

Also Read  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ ➤ ಸ್ವಚ್ಛತಾ ಕಾರ್ಯಕ್ರಮ

error: Content is protected !!
Scroll to Top