ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ ➤ ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕೊಡಗು, ಆ.11:  ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

 

 

ಬೆಳಗ್ಗೆ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿತ್ತು. ಬಳಿಕ ಕಾರ್ಯಾಚರಣೆ ಮುಂದುವರಿಸಿದಾಗ ನಾರಾಯಣ ಆಚಾರ್‌ ಅವರ ಶವ ಸಿಕ್ಕಿದೆ. ಐದು ದಿನಗಳ ಬಳಿಕ ನಾರಾಯಣ ಆಚಾರ್ ಮೃತದೇಹ ಪತ್ತೆಯಾಗಿದೆ. 2 ದಿನಗಳ ಹಿಂದೆ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.ಕಾರ್ಯಾಚರಣೆ  ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಹಾಜರಿದ್ದು, ಮನೆಯಲ್ಲಿ ದೊರೆತ ವಸ್ತುಗಳನ್ನು ಅವರ ಸಮ್ಮುಖದಲ್ಲಿ ಮಹಜರು ಮಾಡಿ ಠಾಣೆಗೆ ಕೊಂಡೊಯ್ಯಲಾಗಿದೆ.  ಆಗಸ್ಟ್ 5ರಂದು ತಡರಾತ್ರಿ ಭಾರೀ ಮಳೆಗೆ ಬ್ರಹ್ಮಗಿರಿ ಬೆಟ್ಟ ಭಾರೀ ಪ್ರಮಾಣದಲ್ಲಿ ಕುಸಿದು ಎರಡು ಮನೆಗಳ ಮೇಲೆ ಬಿದ್ದ ಪರಿಣಾಮ ಐವರು ಜೀವಂತ ಸಮಾಧಿಯಾಗಿದ್ದರು. ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್, ಪತ್ನಿ ಶಾಂತಾ, ಸಹಾಯಕ ಅರ್ಚಕರಾದ  ರವಿಕಿರಣ್ ಹಾಗೂ ಶ್ರೀನಿವಾಸ್ ಅವರು ದುರಂತದಲ್ಲಿ ಕಾಣೆಯಾಗಿದ್ದರು.

 

error: Content is protected !!

Join the Group

Join WhatsApp Group