ವಿಪಕ್ಷ ನಾಯಕ ಮಾಜಿ ಸಿಎಂ ಕೊರೋನಾದಿಂದ ಗುಣಮುಖ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಆ. 12, ಕೊರೋನಾ ಸೋಕು ದೃಢಪಟ್ಠ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಅವರು ಈಗ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ನಡೆಸಲಾದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ಇವರಿಗೆ ಆರಂಭದ ಎರಡು ದಿನ ಜ್ವರ ಕಾಣಿಸಿಕೊಂಡಿದ್ದು, ಸೋಂಕಿನ ಉಳಿದ ಯಾವುದೇ ಲಕ್ಷಣವಿರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Scroll to Top