ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಗುಂಡ್ಯ, ಆ,17:  ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯ ಸಮೀಪ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

 

 

 

ಪರಿಣಾಮ ಲಾರಿ ಭಾಗಶ: ಸುಟ್ಟು ಹೋಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಗುಂಡ್ಯ ಗಡಿ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದರ ಅರಿವು ಆಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿದ್ದು ಬಳಿಕ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ. ಬೆಂಕಿಯಿಂದಾಗಿ ಲಾರಿಯ ಟಯರ್ ಸುಟ್ಟು ಹೋಗಿದ್ದು, ಹೆಚ್ಚಿನ ಅನಾಹುತ ನಡೆದಿಲ್ಲ ಎಂದು ತಿಳಿದು ಬಂದಿದೆ. ಇನ್ನು ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

 

Also Read  ಜೈನಮುನಿಗಳ ರಕ್ಷಣೆಗೆ ಗೃಹಸಚಿವರ ಭರವಸೆ- ಉಪವಾಸ ಕೈಬಿಟ್ಟ ಗುಣಧರ ನಂದಿ ಮಹಾರಾಜ

error: Content is protected !!
Scroll to Top