ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) ಬೆಳ್ತಂಗಡಿ, ಆ. ೧೯. ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿಷ ಸೇವಿಸಿದ ಪರಿಣಾಮ ಕಾರಿನಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ KA-05-MT-4877 ನಂಬರ್ ನ ಕ್ವಿಡ್ ಕಾರೊಂದು ನಿಂತಿದ್ದು, ಅದೇ ಕಾರಿನಲ್ಲಿ ಆತ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಆದರೆ ಮೃತಪಟ್ಟವನ ಗುರುತು ಪತ್ತೆಯಾಗಿಲ್ಲ. ಕಾರಿನ ಪಕ್ಕದ ರಸ್ತೆಯಲ್ಲಿ ವಿಷದ ಬಾಟಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಎಲ್ಲ ಸಾರಿಗೆ ವಾಹನಗಳಿಗೆ ಈ ನಿಯಮ ಕಡ್ಡಾಯ ಮಾಡಿ ಸರ್ಕಾರ ಆದೇಶ !

error: Content is protected !!
Scroll to Top