ದಸರಾಗೂ ತಟ್ಟಿದ ಕೊರೋನಾ ಬಿಸಿ ➤ ವಿಶ್ವವಿಖ್ಯಾತ ಜಂಬೂ ಸವಾರಿಗೆ ಬೀಳುತ್ತಾ ಬ್ರೇಕ್..?

(ನ್ಯೂಸ್‌ಕಡಬ) newskadaba.com ಬೆಂಗಳೂರು, ಆ 20: ಮಹಾಮಾರಿ ಕೊರೋನಾ ಸೋಂಕಿನಿಂದ ಮೈಸೂರು ದಸರಾ ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಈ ಬಾರಿ ಅವಕಾಶ ಇಲ್ಲದಂತಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ ಸರಳ ದಸರಾ ಆಚರಣೆ ಮಾಡಿದರೂ ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯುವುದು ಅನುಮಾನ . ಏಕೆಂದರೆ ಜಂಬೂ ಸವಾರಿಯನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಕೊರೋನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಜಂಬೂ ಸವಾರಿಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆಗಳು ತೀರ ಕಡಿಮೆ ಎಂದು ತಿಳಿದುಬಂದಿದೆ.

Also Read  ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

error: Content is protected !!
Scroll to Top