ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, . 25. ಸ್ನಾನ ಮಾಡುತ್ತಿದ್ದ ವೇಳೆ ನೀರು ಪಾಲಾಗಿದ್ದ ಮಂಗಳೂರು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ.

ಮೃತರನ್ನು ಮಂಗಳೂರು ಎಕ್ಕೂರಿನ ನಿವಾಸಿ ವಿನೋದ್ ( 35 ) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಈನ  ಘಟನೆ ನಡೆದಿದ್ದು, ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆಯ ಬಳಿ ಹೊಳೆಯೊಂದರಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಿ, ಸ್ಥಳಕ್ಕಾಗಮಿಸಿ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಎರಡು ದಿನಗಳ ಬಳಿಕ ಮಧೂರು ಹೊಳೆ ಬದಿಯಿಂದ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಕೋವಿಡ್ ತಪಾಸಣೆಯ ವರದಿ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಿದೆ.

error: Content is protected !!

Join the Group

Join WhatsApp Group