ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮುಂಬೈ, . 27. ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಮಹಾರಾಷ್ಟ್ರದ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್  ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ರಾಜೀನಾಮೆ ಪತ್ರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಅಸಾಧ್ಯವಾಗುವ ಹಿನ್ನೆಲೆ ನನಗೆ ಸಂಸದನಾಗಿರಲು ಹಕ್ಕಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

error: Content is protected !!
Scroll to Top