ಪಣಂಬೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು‌, ಸೆ.17. ರಜೆಯ ಮಜಾ ಸವಿಯಲೆಂದು ಬಂದು ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರಪಾಲಾದ ಘಟನೆ ಪಣಂಬೂರು ಮೀನಕಳಿಯ ಎಂಬಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ.

ಆಂಧ್ರ ಪ್ರದೇಶದ ಮೂಲದ ಸಾಯಿಚರಣ್ (19) ಮೃತ ಯುವಕ. ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡುತ್ತಿದ್ದ ಸಾಯಿಚರಣ್ ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ರಜೆ ಕಳೆಯಲು ಬಂದಿದ್ದ. ಮಡಿಕೇರಿಗೆ ತೆರಳಿ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕನ ಶವ ಪತ್ತೆಗೆ ಸಮುದ್ರದ ಅಲೆಗಳ ಹೊಡೆತ ಅಡ್ಡಿಯಾಗಿದ್ದು, ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group