ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು

(ನ್ಯೂಸ್ ಕಡಬ) newskadaba.com ಕಡಬ, ಆ.28. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಲ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ ಐ ಸಮೀಪ ಶುಕ್ರವಾರದಂದು ನಡೆದಿದೆ.

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಕೊಯಿಲ ಗ್ರಾಮದ ಕಡೆಂಬಿಯಾಲ್ ನಿವಾಸಿಗಳಾದ ಯತೀಶ್(21) ಹಾಗೂ ಶರತ್(19) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Also Read  ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top