ಮಂಗಳೂರು ಗೋಲಿಬಾರ್ ➤ ಸೆಪ್ಪೆಂಬರ್ 1 ರಂದು ಅಂತಿಮ ವಿಚಾರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.  ದಿನಾಂಕ 19.12.2019 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್  ವ್ಯಾಪ್ತಿಯಲ್ಲಿ  ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು  ನೇಮಕ ಮಾಡಿ ಆದೇಶ ಹೊರಡಿಸಲಾಗಿರುತ್ತದೆ.

 ಈ ಸಂಬಂಧ ಸದ್ರಿ ದಿನ ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸೆಪ್ಪೆಂಬರ್ 1 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನ ಸೌಧ, ಮಂಗಳೂರು,  ಇಲ್ಲಿಗೆ  ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ನೀಡಲಾಗಿದೆ. ತದನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಪ್ರಕಟಣೆ ತಿಳಿಸಿದೆ.

Also Read  ಡಿ. 01ರಿಂದ ಕುಕ್ಕೇ ಸುಬ್ರಹ್ಮಣ್ಯ ಷಷ್ಟೀ ಮಹೋತ್ಸವ ಹಿನ್ನೆಲೆ ➤ ಸಂಪ್ರದಾಯದಂತೆ ಬೆತ್ತ ಸಂಗ್ರಹಕ್ಕೆ ಕಾಡಿಗೆ ತೆರಳಿದ ಮಲೆಕುಡಿಯರು

error: Content is protected !!
Scroll to Top