► ‘ನ್ಯೂಸ್ ಕಡಬ’ ಮೊಬೈಲ್ ಅಪ್ಲಿಕೇಶನ್ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಸ್ಥಳೀಯ ಸುದ್ದಿಗಳ ಜಾಲತಾಣ ‘ನ್ಯೂಸ್ ಕಡಬ’ ಹೊರತಂದಿರುವ ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಸ್. ಬಾಲಕೃಷ್ಣ ಕೊಯಿಲ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ವಿಜಯ ಕುಮಾರ್, ಪ್ರವೀಣ್ ರಾಜ್ ಕೊಯಿಲ, ಖಾದರ್ ಸಾಹೇಬ್ ಕಲ್ಲುಗುಡ್ಡೆ, ಸುದ್ದಿ ಬಿಡುಗಡೆ ಪ್ರತಿನಿಧಿ ಉದಯ ಕುಮಾರ್, ನ್ಯೂಸ್ ಕಡಬ ಸುದ್ದಿ ಸಂಸ್ಥೆಯ ನಿರ್ದೇಶಕರಾದ ಮಹಮ್ಮದ್ ಕೆ., ಸಿಬ್ಬಂದಿಗಳಾದ ತಸ್ಲೀಂ ಮರ್ಧಾಳ, ಸೌಮ್ಯ ಕೊಯಿಲ ಮೊದಲಾದವರು ಉಪಸ್ಥಿತರಿದ್ದರು.

ಮೊಬೈಲ್ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ 

https://play.google.com/store/apps/details?id=com.newskadaba.app&hl=en

error: Content is protected !!

Join the Group

Join WhatsApp Group