ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ,30: ಅಡಿಕೆ ಪತ್ರಿಕೆ ಪ್ರಕಾಶಕ, ಪತ್ರಿಕೆಯನ್ನು ನಡೆಸುತ್ತಿದ್ದ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸಿ ಆಚಾರ್ ಕಳೆದ ದಿನ ಬೆಳಿಗ್ಗೆ ನಿಧನರಾಗಿದ್ದಾರೆ.

 

ಕಳೆದ ಮೂರು ದಶಕಗಳಿಂದ ಬೇರೆ ಬೇರೆ ಪದಾಧಿಕಾರಿಯಾಗಿದ್ದು, ಅವರು ಅಡಿಕೆ ಕೃಷಿ ಸಮುದಾಯದ ಹಿತಾಸಕ್ತಿ ರಕ್ಷಣೆಯಾಗಿ ಅಡಿಕೆ ಪತ್ರಿಕೆಯ ನಿರ್ವಾಹಣೆಗಾಗಿ ತಮ್ಮ ಗಣನೀಯ ಕೊಡುಗೆ ನೀಡಿದ್ದರು. ಮೃತರು ಪತ್ನಿ , ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Also Read  ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯

error: Content is protected !!
Scroll to Top