ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ. 31. ಭಾರತೀಯ ಭದ್ರತಾ ಪಡೆಯ ಯೋಧರೋರ್ವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟ ಘಟನೆ ಜಮ್ಮು ಕಾಶ್ಮಿರದಲ್ಲಿ ಸಂಭವಿಸಿದೆ.


ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶಿವಾನಂದ ಜಗನ್ನಾಥ ಬಡಿಗೇರ (29) ಎಂದು ಗುರುತಿಸಲಾಗಿದೆ. ಇವರು ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು, ಜಮ್ಮು ಕಾಶ್ಮೀರದ ಬಿಎಸ್ಎಫ್ ಹೌಸ್ ನಲ್ಲಿ ವಿದ್ಯುತ್ ರಿಪೇರಿ ಮಾಡುವ ಸಂದರ್ಭ ಈ ಘಟನೆ ಸಂಭವಿಸಿದೆ ಎಂದು ಬಿಎಸ್ಎಫ್ ಹಿರಿಯ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

Also Read  ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ

ಕಳೆದ 9 ವರ್ಷಗಳ ಹಿಂದೆ ಬಿಎಸ್‌ಎಫ್‌ಗೆ ಸೇರಿದ್ದ ಇವರು ಕಳೆದ ವರ್ಷ ಮದುವೆಯಾಗಿದ್ದು ಪತ್ನಿ, ತಂದೆ- ತಾಯಿ, ಮೂವರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

error: Content is protected !!
Scroll to Top