ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 01. ಇಲ್ಲಿನ ಹಿರೇಬಂಡಾಡಿ ಸಮೀಪ ಮುರದಮೇಲು ಎಂಬಲ್ಲಿ ಬೈಕೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.


ಗಂಭೀರ ಗಾಯಗೊಂಡವರನ್ನು ಕಡಬ ಗ್ರಾಮದ ಪಾಲೋಳಿಯ ಜನಾರ್ಧನ್ ಗೌಡ ಗಂಭೀರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಜತೆಯಲ್ಲಿದ್ದ ಕಾರು ಚಾಲಕನ ಸಂಬಂಧಿ ಪುತ್ತೂರು ಆಸ್ಪತ್ರೆ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ. ಈತ ನಿನ್ನೆಯಷ್ಟೇ ಅಕ್ರಮ ಪಿಸ್ತೂಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಘಟನಾ ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

error: Content is protected !!
Scroll to Top