ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.

 

ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಇಬ್ಬರು ಶಾಸಕರು ಈಚೆಗೆ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಸಂಪರ್ಕವನ್ನು ಹೊಂದಿದ್ದರು ಎನ್ನಲಾಗಿದೆ.

Also Read  ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ

 

 

 

error: Content is protected !!
Scroll to Top