ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ರಾಜಕೀಯ ಧುರೀಣ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಪ್ರಣಬ್ ಮುಖರ್ಜಿ ಅವರಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಯು.ಟಿ ಖಾದರ್ ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕೆ ಕುಮಾರ್ ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್ ಕವಿತಾ ಸನಿಲ್, ಶಶಿಧರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Also Read  ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

error: Content is protected !!
Scroll to Top