ಮಂಗಳೂರು :ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.04:  ಮಂಗಳೂರು ಬಂದರು ಠಾಣೆಯ ಪೊಲೀಸ್ ಸಿಬ್ಬಂದಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನೇಶ್(44) ಮೃತಪಟ್ಟ ಪೊಲೀಸ್ ಸಿಬ್ಬಂದಿ. ದಿನೇಶ್ ರವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಗುರುವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ. ಎಂದು ಮೂಲಗಳು ತಿಳಿಸಿವೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಕರ್ತವ್ಯದಲ್ಲಿ ಕೆಲಸ ಮಾಡುತ್ತಿದ್ದಾಗ ಉತ್ತಮ ಸೇವಾ ದಾಖಲೆ ಹೊಂದಿದ್ದರು.

Also Read  ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

error: Content is protected !!