ಧರ್ಮಸ್ಥಳದಿಂದ ಶಿಕ್ಷಣ ಕ್ಷೇತ್ರಕ್ಕೆ 17 ಕೋಟಿ ರೂ. ಸಹಕಾರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ.05:  ವಿದ್ಯಾಕ್ಷೇತ್ರಕ್ಕೆ ಧರ್ಮಸ್ಥಳದಿಂದ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ.ಈ ಬಾರಿ ವಿದ್ಯಾಸಂಸ್ಥೆಗಳಿಗೆ ಕೊಡುವ ಸಹಕಾರದಲ್ಲಿ ವಿಶೇಷವಾಗಿ ಬೆಂಚು-ಡೆಸ್ಕ್ ಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ ಗಳನ್ನು 1990 ನೇ ಇಸವಿಯಿಂದ ಇದುವರೆಗೆ ಕರ್ನಾಟಕ ರಾಜ್ಯದ 9645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ 17 ಕೋಟಿ ರೂ. ಮೌಲ್ಯದ ಬೆಂಚು-ಡೆಸ್ಕ್ ಗಳನ್ನು ನೀಡಲಾಗಿದೆ.

 

ಈ ವರ್ಷದ ಬಜೆಟ್‍ನಲ್ಲಿ ಇದಕ್ಕಾಗಿ ಒಂದು ಕೋಟಿ ರೂ. ನಿಗದಿಪಡಿಸಲಾಗಿದೆ. ಶ್ರದ್ಧೆಯ ವಿದ್ಯಾದಾನ ನಡೆಸಿ: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅಧ್ಯಾಪಕರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ತಿಳಿಸಿದರು. ಕೊರೊನಾ ಮುಕ್ತ ಮುಂದಿನ ದಿನಗಳಲ್ಲಿ ಹೆಚ್ಚಿನ ಶ್ರದ್ಧೆಯಿಂದ ವಿದ್ಯಾದಾನ ಮಾಡುವಂತೆ ಸಂದೇಶವನ್ನು ನೀಡಿ ಎಲ್ಲರಿಗೂ ಶುಭ ಹಾರೈಸಿದ್ದಾರೆ.

Also Read  ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

 

error: Content is protected !!
Scroll to Top