ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 05. ಕೆಲಸದ ಆಮಿಷ ನೀಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಯುವಕರಿಗೆ ಒಪ್ಪಿಸಿ ಅತ್ಯಾಚಾರ ಮಾಡಿಸಲಾಗುತ್ತಿದೆ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸದಂತೆ ಪೊಲೀಸ್ ಇಲಾಖೆ ಕೂಡಲೆ ಕಠಿಣ ಕ್ರಮ ಜರುಗಿಸಬೆಕು ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿದೆ.

ನಕಲಿ ಖಾತೆ ಮೂಲಕ ಅಪಪ್ರಚಾರ ನಡೆಸಿ, ಸಮಾಜದಲ್ಲಿ ಶಾಂತಿ ಕದಡಿ ಮಾನಹಾನಿ ಮಾಡುವ ಜಾಲವೇ ಸಕ್ರಿಯವಾಗಿದ್ದು, ಇದರ ಕಡಿವಾಣ ಅತಿ ಅಗತ್ಯವಾಗಿದೆ. ಪೊಲೀಸರು ಇಂಥ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಸಮಾಜದಲ್ಲಿ ಅಶಾಂತಿ ಭುಗಿಳೇಲುವ ಸಾಧ್ಯತೆಯಿದೆ. ಶರಣ್ ಪಂಪ್ ವೆಲ್ ವಿರುದ್ದ ನಕಲಿ ಫೇಸ್ಬುಕ್ ಖಾತೆಯಲ್ಲಿ ಅಪಪ್ರಚಾರ ಮಾಡಲಾಗಿದೆ ಎಂದು ಪುನೀತ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top