ಜೇಸಿಐ ನೆಲ್ಯಾಡಿ ವತಿಯಿಂದ ನಿವೃತ್ತ ಶಿಕ್ಷಕ ಗೋಪಾಲಕೃಷ್ಣ ಶಗ್ರಿತ್ತಾಯರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 06. ಶಿಕ್ಷಕ ದಿನಾಚರಣೆ ಪ್ರಯುಕ್ತ ಜೇಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿ ಪಡುಬೆಟ್ಟಿನ ನಿವೃತ್ತ ಶಿಕ್ಷಕ, ಸಾಹಿತ್ಯ ರತ್ನ ಗೋಪಾಲಕೃಷ್ಣ ಶಗ್ರಿತ್ತಾಯರನ್ನು ಅವರ ನಿವಾಸದಲ್ಲಿ ಗೌರವಾರ್ಪಣೆ ಮಾಡಿ ಸನ್ಮಾನಿಸಲಾಯಿತು.

 

ಈ ಸಂದರ್ಭದಲ್ಲಿ ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲಾ ಕನ್ನಡ ಶಿಕ್ಷಕರಾದ ವಿ.ಆರ್. ಹೆಗಡೆ, ನೆಲ್ಯಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ ಉಪಸ್ಥಿತರಿದ್ದರು. ಜೇಸಿಐ ನೆಲ್ಯಾಡಿ ಘಟಕಾಧ್ಯಕ್ಷ ಶಿವಪ್ರಸಾದ್ ರವರು ಅಧ್ಯಕ್ಷತೆ ವಹಿಸಿದ್ದರು. ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯರೂ, ಪ್ರಗತಿ ಪರ ಕೃಷಿಕರೂ ಆದ ಕೆಡೆಂಜಿ ಗುತ್ತು ಪ್ರವೀಣ್ ಕುಮಾರ್, ನೆಲ್ಯಾಡಿ ಜೆಸಿಐ ಕಾರ್ಯದರ್ಶಿ ಗಿರೀಶ್, ಸಿವಿಲ್ ಇಂಜಿನಿಯರ್ ಬಾಲಕೃಷ್ಣ ಪಿ.ಹೆಚ್ .ಪುಂಡಿಕಾಯಿ ಬಾಲಚಂದ್ರ ಶಗ್ರಿತ್ತಾಯ, ಸರಸ್ವತೀ ಗೋಪಾಲಕೃಷ್ಣ ಶಗ್ರಿತ್ತಾಯ ಉಪಸ್ಥಿತರಿದ್ದರು.

Also Read  ಕಡಬ ತಾಲೂಕಿನಲ್ಲಿ ವಿವಿಧ ಇಲಾಖೆಗಳನ್ನು ತೆರೆಯುವಂತೆ ಕ್ರಮ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

error: Content is protected !!
Scroll to Top