ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.11.  ಮೂವರ ಹತ್ಯೆ ಮಾಡಿ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ.

ಗಣೇಶ, ಪ್ರಕಾಶ, ಆನಂದ ಕೊಲೆಯಾದವರು, ಇವರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗುರುವಾರ ತಡರಾತ್ರಿ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಕೊಲೆ ನಂತರ ಹುಂಡಿಯಲ್ಲಿನ ಹಣ ದೋಚಿ ಪರಾರಿಯಾಗಿದ್ದಾರೆ. ಹುಂಡಿ ಹಣಕ್ಕಾಗಿ ಈ ಕೊಲೆಗಳು ನಡೆದಿವೆ ಎಂದು ಶಂಕಿಸಲಾಗಿದ್ದು, ಮಂಡ್ಯ ಪೂರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group